suddiduniya.com

K S Eshwarappa ಒಂದೇ ಕುಟಂಬದ ಹಿಡಿತದಿಂದ ಬಿಜೆಪಿ ಹೊರಬರಬೇಕು

K S Eshwarappa

ಲಿಂಗಸುಗೂರು : ಬಿಜೆಪಿ ರಾಜ್ಯದಲ್ಲಿ ಒಂದೇ ಕುಟಂಬದ ಹಿಡಿತದಲ್ಲಿದೆ, ಅಲ್ಲಿಂದ ಹೊರಬಂದು ಶುದ್ಧೀಕರಣವಾಗಬೇಕು ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್‍.ಈಶ್ವರಪ್ಪ ಹೇಳಿದರು.

K S Eshwarappa

ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ನನ್ನ ತಾಯಿ ಇದ್ದಂತೆ, ನಾನು ಬೇರೆ ಪಕ್ಷಕ್ಕೆ ಹೋಗಲ್ಲ,ಆದರೆ ರಾಜ್ಯದ ಬಿಜೆಪಿ ಶುದ್ಧೀಕರಣಗೊಳ್ಳಬೇಕಾಗಿದೆ. ಒಂದೇ ಕುಟಂಬದ ಹಿಡಿತದಲ್ಲಿ ಪಕ್ಷ ಇದೆ, ಹೊಂದಾಣಿಕೆ ರಾಜಕೀಯ ನಡೆಯುತ್ತಿದೆ. ಸಾಮೂಹಿಕ ನಾಯಕತ್ವ ನಡೆಯುತ್ತಿಲ್ಲಾ ಈಗಾಗಿ ಬಿಜೆಪಿ ಶುದ್ಧೀಕರಣಗೊಳ್ಳುವ ಕಾಲ ಸನ್ನಿಹತವಾಗಿದೆ. ಪಕ್ಷದ ರಾಷ್ಟ್ರೀಯ ನಾಯಕರು ನಮ್ಮ ಸಂಪರ್ಕದಲ್ಲಿದ್ದಾರೆ ಮುಂದಿನ ದಿನಮಾನಗಳಲ್ಲಿ ತಿರ್ಮಾನ ತೆಗೆದುಕೊಳ್ಳಲಾಗುತ್ತಿದೆ. ಸಂವಿಧಾನ ಬದ್ಧವಾಗಿ, ಪ್ರಜಾಪ್ರಭುತ್ವ ಅಡಿಯಲ್ಲಿ ಚುನಾವಣೆ ನಡೆಯುತ್ತಿರುವುದು ಬಿಜೆಪಿಯಲ್ಲಿ ಮಾತ್ರ ಇದೆ.  ಪಕ್ಷದ ಮಂಡಲ ಅಧ್ಯಕ್ಷ, ಜಿಲ್ಲಾಧ್ಯಕ್ಷ, ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದೆ ಪಕ್ಷದ ಸದಸ್ಯರಾದವರು ಸ್ಪರ್ದೆ ಮಾಡಬಹುದು ಎಂದರು.

K S Eshwarappa

ನಾನು ಲೋಕೋಪಯೋಗಿ ಸಚಿವನಾಗಿದ್ದ ವೇಳೆ ನನ್ನ ಮೇಲೆ ಆರೋಪ ಬಂದ ಕೂಡಲೇ ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇ, ಆದರೆ ಮುಡಾ ಕೇಸಿನಲ್ಲಿ ಸಿದ್ದರಾಮಯ್ಯನವರ ಆರೋಪ ಬಂದಿದೆ ಅವರಿಗೆ ನೈತಿಕತೆ ಇದ್ದರೆ ರಾಜೀನಾಮೆ ನೀಡಬೇಕು. ಪ್ರತಿಯೊಂದಕ್ಕೊ ಸಂವಿಧಾನ ಸಂವಿಧಾನ ಎಂದು ಹೇಳುವ ಕಾಂಗ್ರೆಸ್‍ನವರು ಸಂವಿಧಾನ ಎಲ್ಲರಿಗೂ ಒಂದೇ ಎಂಬುದನ್ನು ಅರಿತುಕೊಳ್ಳಬೇಕು ಎಂದು ಕುಟಕಿದರು.

K S Eshwarappa

ಹಲವು ಮಹತ್ವದ ಉದ್ದೇಶ ಇಟ್ಟುಕೊಂಡು ಕ್ರಾಂತಿವೀರ ಬ್ರಿಗೇಡ್ ಹುಟ್ಟು ಹಾಕಲಾಗಿದೆ. ಫೆ. 4ರಂದು ಬಸವನಬಾಗವೇವಾಡಿಯಲ್ಲಿ 1008 ಮಂದಿ ಸಾಧು ಸಂತರ ಪಾದ ಪೂಜೆ ಮಾಡಿ ಉದ್ಘಾಟನೆ ಮಾಡುತ್ತೇವೆ. ರಾಜ್ಯದಲ್ಲಿ ಸಾವಿರಾರು ಸಣ್ಣ ಮಠಗಳಿವೆ. ಕ್ರಾಂತವೀರ ಬ್ರಿಗೇಡ್​​ನಿಂದ ಸಣ್ಣ ಮಠಗಳಿಗೆ ನ್ಯಾಯ ಕೊಡಿಸುವ ಕೆಲಸವಾಗುತ್ತದೆ. ಹಿಂದೂ ಧರ್ಮದ ರಕ್ಷಣೆಗೆ ನಮ್ಮ ಹೋರಾಟ. ಮಠಾಧೀಶರು ಬ್ರಿಗೇಡ್ ಆರಂಭ ಮಾಡತ್ತಿದ್ದಾರೆ ಎಂದು ಹೇಳಿದರು.

Suddiduniya.com

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!