ಎರಡನೇ ದಿನಕ್ಕೆ ಕಾಲಿಟ್ಟ ಹೋರಾಟ
ಲಿಂಗಸುಗೂರು : ವಿವಿಧ ಸಮಸ್ಯೆಗಳ ಹಾಗೂ ಬೇಡಿಕೆಗಳ ಈಡೇರಿಕೆಗಾಗಿ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ (Protest by VA) ನೇತ್ರತ್ವದಲ್ಲಿ ಪಟ್ಟಣದ ಸಹಾಯಕ ಆಯುಕ್ತ ಕಚೇರಿ ಆವರಣಲ್ಲಿ ಅನಿರ್ಧಿಷ್ಟಾವಧಿ ಧರಣಿ ನಡೆಸಿದರು.
ಗ್ರಾಮ ಆಡಳಿತ ಅಧಿಕಾರಿಗಳಿಗೆ ಸುಸಜ್ಜಿತವಾದ ಕಚೇರಿ, ಉತ್ತಮ ಪೀಠೋಪಕರಣ, ಗುಣಮಟ್ಟದ ಮೊಬೈಲ್ ಪೋನ್ಇತರೆ ಪರಿಕರಗಳನ್ನು ಒದಗಿಸಬೇಕು. ಕಂದಾಯ ಇಲಾಖೆಯಿಂದ ನಿರಂತರವಾಗಿ ಸರಕಾರದಿಂದ ಅಭಿವೃದ್ಧಿಪಡಿಸಿದ ವೆಬ್ಮತ್ತು ಮೊಬೈಲ್ ಆ್ಯಪ್ ಗಳಲ್ಲಿ ಸಮರ್ಪಕ ಸೇವೆ ಸಲ್ಲಿಸುತ್ತಿರುವ ಹಿನ್ನಲೆಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಯನ್ನು ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿ ನಿಗದಿಪಡಿಸಬೇಕು.

ಕಳೆದ ನಾಲ್ಕು ವರ್ಷಗಳಿಂದ ಕಂದಾಯ ಇಲಾಖೆಯಲ್ಲಿ ಪದೋನ್ನತಿ ಹಾಗೂ ವರ್ಗಾವಣೆಗೆ ಸಂಬಂಧಿಸಿದಂತೆ ಕೆಸಿಎಸ್ಆರ್ ನಿಯಮ 16ಎ ಉಪಖಂಡ-2ವನ್ನು ಹಿಂಪಡೆದಿರುವುದರಿಂದ ನೌಕರರ ಜೀವನದಲ್ಲಿ ಹಲವಾರು ಸಮಸ್ಯೆಗಳು ಉಂಟಾಗುತ್ತಿದ್ದರಿಂದ ಅದ್ಧತಿಂದ 16ಎ ಉಪಖಂಡ 2ನ್ನು ಮರುಸ್ಥಾಪಿಸಬೇಕು. ಆಧಾರ್ ಸೀಡಿಂಗ್ ಪ್ರಕ್ರೀಯೆಯಲ್ಲಿ ಪತ್ತೆಯಾಗಿರುವ ಸುಮಾರು 51.5 ಲಕ್ಷ ಮೃತ ಖಾತೆದಾರರ ಪಹಣಿಗಳನ್ನು ಅಭಿಯಾನ ಮಾದರಿಯಲ್ಲಿ ವಾರಸುದಾರರ ಹೆಸರುಗಳಿಗೆ ವಾರಸುದಾರ ಪ್ರಮಾಣ ಪತ್ರ. ಮರಣ ಪ್ರಮಾಣ ಪತ್ರ ಮತ್ತು ಇತರೆ ದಾಖಲುಗಳು ಇಲ್ಲದೆ ಪೌತಿ ಖಾತೆ ದಾಖಲಿಸುವಂತೆ ಇ-ಪೌತಿ ಖಾತಾ ಆಂದೋಲನ ಚಾಲನೆ ನೀಡುತ್ತಿರುವುದುನ್ನು ಕೈಬಿಡಬೇಕು. ಚಿಕ್ಕಮಗಳೂರು ಜಿಲ್ಲೆಯಲ್ಲಿ 30 ಗ್ರಾಮ ಆಡಳಿತ ಅಧಿಕಾರಿಗಳ ವಾರ್ಷಿಕ ವೇತನ ಬಡ್ತಿ ತಡೆದು ಹಿಡಿದು ನೈಸರ್ಗಿಕ ನ್ಯಾಯ, ತತ್ವಗಳನ್ನು ಹಾಗೂ ಎಲ್ಲಾ ನಿಯಮಗಳನ್ನು ಉಲ್ಲಂಘಿಸಿ ಹೊರಡಿಸಿರುವ ದಂಡನಾ ಆದೇಶ ಹಿಂಪಡೆಯಬೇಕು. ಕಂದಾಯ ಮತ್ತು ರಾಜ್ಯ ಸರಕಾರಿ ನೌಕರರ ಎಲ್ಲಾ ವೃಂದಗಳನ್ನು ಒಳಗೊಂಡಂತೆ ನೀಡುತ್ತಿರುವ ಅನುಕಂಪದ ನೇಮಕಾತಿ ಹುದ್ದೆಯ ವೃಂದ ಮತ್ತು ನೇಮಕಾತಿ ತಿದ್ದುಪಡಿ ಮಾಡಬೇಕು.

ವಿಎಗಳಿಗೆ 50 ಲಕ್ಷ ರೂಪಾಯಿ ಪರಿಹಾರ ನೀಡಿ :
ಕ್ಷೇತ್ರಮಟ್ಟದಲ್ಲಿ ಕರ್ತವ್ಯ ನಿರ್ವಹಿಸುವಾಗ ಜೀವ ಹಾನಿ ಆಗುವ ಗ್ರಾಮ ಆಡಳಿತ ಅಧಿಕಾರಿಗಳ ಕುಟಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರ ಮಂಜೂರು ಮಾಡಬೇಕು.ಮಾತೃ ಇಲಾಖೆ ಎಲ್ಲಾ ಕೆಲಸಗಳೊಂದಿಗೆ ಸರಕಾರದ ಆದೇಶದಂತೆ ಇತರೆ ಇಲಾಖೆಗಳ ಹಲವಾರು ಕೆಲಸಗಳನ್ನು ನಿರ್ವಹಿಸುವ ಹಾಗೂ ಚುನಾವಣೆ ಅತಿವೃಷ್ಠಿ ಅನಾವೃಷ್ಠಿ, ಇನ್ನಿತರ ಗುರುತರವಾದ ಜವಬ್ದಾರಿಯುತ ಕರ್ತವ್ಯ ನಿರ್ವಹಿಸುತ್ತಿರುವ ದಿನನಿತ್ಯ ಸಾರ್ವಜನಿಕ ವಲಯದಲ್ಲಿ ನೂರಾರು ಸೇವೆಗಳನ್ನು ನೀಡುವಾಗ ಮರಣಾಂತಿಕ ದೈಹಿಕ ಹಲ್ಲೆ, ಕೊಲೆ ಪ್ರಕರಣಗಳು ಈಗಾಗಲೇ ನಿರಂತರವಾಗಿ ನಡೆಯುತ್ತಿದ್ದು, ಅರಣ್ಯ ಹಾಗೂ ಪೊಲೀಸ್ ಇಲಾಖೆಯಲ್ಲಿರುವಂತೆ ಮೂರು ಸಾವಿರ ರೂಪಾಯಿ ಆಪತ್ತಿನ ಭತ್ಯೆ ನೀಡಬೇಕು ಎಂದು ಆಗ್ರಹಿಸಿ ಧರಣಿ ಆರಂಭಿಸಿದ್ದಾರೆ.

ಈ ಧರಣಿಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ಅಮರೇಶ ರಾಠೋಡ್, ತಾಲೂಕಾಧ್ಯಕ್ಷ ವಿನಯಕುಮಾರ, ಮಲ್ಲಿಕಾರ್ಜುನ, ಚಂದ್ರೆಶೇಖರ್, ಯೇಸಪ್ಪ, ನಾಗರತ್ನ ಸೇರಿದಂತೆ ಅನೇಕರಿದ್ದರು.